Saturday, July 27, 2013

ಒಗ್ಗಟ್ಟು

             ಒಗ್ಗಟ್ಟು
 
      ನನ್ನ ಮನದೊಳು ಮೂಡಿದ ಆಶ್ಚರ್ಯವಿದು
      ನಮ್ಮವರೇ ಕೊಡುವ ಲಘು ಆಘಾತವಿದು

      ಬೆಂಗಳೂರೆಂಬ ಕನ್ನಡಿಗರ ರಾಜಧಾನಿಯಲಿ
      ಕಾಣುತಿದೆ ಕನ್ನಡಿಗರ ಭಾಷಾ ನಿರಭಿಮಾನ

      ನನ್ನ ಕನ್ನಡಾಭಿಮಾನವೇ ಅಸಹಜ ಹಾಗೂ
      ಅಪರೂಪದ್ದೇ ಎಂದೆನಿಸುವಷ್ಟು ಅನುಮಾನ

      ಒಗ್ಗಟ್ಟು ಮೂಡಿಸಲು ಕೊಡರು ಪ್ರೋತ್ಸಾಹ
      ಆಸಕ್ತರಿಗೂ ಹರಡುವರು ತಮ್ಮ ನಿರುತ್ಸಾಹ

       ಸರಳ ಕನ್ನಡದ ಸುಖ ಬೇಡವೇ ನಿಮಗೆ
       ಸಹಜತೆಯಲ್ಲೇ ಸಂತಸವಲ್ಲವೇ ನಮಗೆ

      ಕನ್ನಡವ ಬಳಸಲು ಪಡಬೇಡಿ ಕೀಳರಿಮೆ
      ನಮ್ಮಲ್ಲೇ ಪರರ ಮೆಚ್ಚಿಸಿ ಪಡದಿರಿ ಗರಿಮೆ

      ಕನ್ನಡದ ಮೇಲೆ ಸದಾ ಇರಲಿ ಅಭಿಮಾನ
      ಕನ್ನಡದಲ್ಲೇ ಅಡಗಿದೆ ನಮ್ಮ ಸ್ವಾಭಿಮಾನ

      ಮುಂದೆ ಬಾರದಿರಲು ನಮ್ಮಲ್ಲಿ ಮುಗ್ಗಟ್ಟು
      ಕನ್ನಡಿಗರ ಹೃದಯದಲಿ ಮೂಡಲಿ ಒಗ್ಗಟ್ಟು

       - ತೇಜಸ್ವಿ. ಎ. ಸಿ

No comments:

Post a Comment